೧೯೪೭ರ ದೇಶ ವಿಭಜನೆ ಸಂಘದ ಸ್ವಯಂಸೇವಕರಿಗೆ ಮತ್ತು ಇತರ ದೇಶ ಪ್ರೇಮಿಗಳಿಗೆ ಅತ್ಯಂತ ದುಃಖದ ವಿಷಯ.
ವಿಭಜನೆಯ ಸ್ವಲ್ಪ ಸಮಯದ ಮುಂಚೆ ಒಂದು ಸಂಘ ಶಿಕ್ಷಾ ವರ್ಗ ಈಗಿನ ಪಾಕಿಸ್ಥಾನದ ಭಾಗದಲ್ಲಿ ನಡೆಯುತ್ತಿತ್ತು. ಸುಮಾರು ೨೦೦ ಸ್ವಯಂಸೇವಕರು ಭಾಗವಹಿಸಿದ್ದರು. ಮುಂದಿನ ಸಂಘರ್ಷದ ಸಮಯದಲ್ಲಿ ನಡೆಯಬಹುದಾದ ಘಟನೆಗಳ ಬಗ್ಗೆ ಮೊದಲೇ ಕಲ್ಪನೆಯಿದ್ದ ಶ್ರೀ ಗುರೂಜಿ ಎಲ್ಲ ಶಿಕ್ಷಾರ್ಥಿಗಳನ್ನು ಕುರಿತು "ಈ ಕಡೆಯಿಂದ ಲಕ್ಷಾಂತರ ಜನ ವಲಸೆ ಹೋಗಲಿದ್ದಾರೆ. ಅವರ ಮೇಲೆ ನಾನಾ ರೀತಿಯ ಅತ್ಯಾಚಾರಗಳು ನಡೆಯುವ ಸಂಭವವಿದೆ. ಪ್ರತಿಯೊಬ್ಬ ಹಿಂದುವನ್ನು ರಕ್ಷಿಸುವುದು ನಿಮ್ಮ ಜವಾಬ್ದಾರಿ. ಕಟ್ಟಕಡೆಯ ಹಿಂದು ಸುರಕ್ಷಿತವಾಗಿ ಭಾರತವನ್ನು ತಲುಪದ ತನಕ ನೀವು ಇಲ್ಲಿಂದ ಹೊರಡಬಾರದು" ಎಂದು ನುಡಿದರು.
ಮುಂದಿನ ದಿನಗಳಲ್ಲಿ ಶ್ರೀ ಗುರೂಜಿಯವರು ನುಡಿದಿದ್ದ ರೀತಿಯಲ್ಲೇ, ವಲಸೆ ಹೊರಟಿದ್ದ ಲಕ್ಷಾಂತರ ಹಿಂದುಗಳನ್ನು ಕೊಲ್ಲಲಾಯಿತು. ಹಿಂದು ಮಹಿಳೆಯರನ್ನು, ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚಾರಗೊಳಿಸಿ ಮತಾಂತರಗೊಳಿಸಲಾಯಿತು. ಆದರೆ ಆ ಶಿಕ್ಷಾವರ್ಗದಲ್ಲಿದ್ದ ಎಲ್ಲ ೨೦೦ ಸ್ವಯಂಸೇವಸೇವಕರೂ ಅಂತಹ ಹಿಂದುಗಳ ರಕ್ಷಣೆಗೆ ನಿಂತರು. ಸಾವಿರಾರು ಹಿಂದುಗಳನ್ನು ಕಾಪಾಡಿ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕಳುಹಿಸಿದರು.
ಆದರೆ ಆ ೨೦೦ ಸ್ವಯಂಸೇವಕರ ಬಲಿಯಾಯಿತು.
No comments:
Post a Comment